ಬೈಕಂಪಾಡಿ | ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ

Spread the love

ಬೈಕಂಪಾಡಿ | ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ

ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಬೈಕಂಪಾಡಿಯಲ್ಲಿ ನಡೆದಿದೆ.

ಕೇರಳದ ಪಯ್ಯನ್ನೂರು ನಿವಾಸಿ ವಿಕಾಸ್ ದರೋಡೆಗೆ ಒಳಗಾದವರು. ಇವರು ತನ್ನ ಪತ್ನಿ ಮತ್ತು ಮಗನೊಂದಿಗೆ ಮುಂಬೈಯ ತನ್ನ ಸ್ನೇಹಿತರೊಬ್ಬರ ಮದುವೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಈ ಕೃತ್ಯ ಎಸಗಲಾಗಿದೆ.

ಬೆಳಗ್ಗಿನ ಜಾವ 2:30 ಸುಮಾರಿಗೆ ವಿಕಾಸ್ ಅವರ ಕಾರು ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ದ್ವಾರ ಹೋಟೆಲ್ ಬಳಿ ತಲುಪುತ್ತಿದ್ದಂತೆ ಮೂರು ಕಾರುಗಳಲ್ಲಿ ಬಂದ ಸುಮಾರು 7-8 ಮಂದಿ ದರೋಡೆಕೋರರು ವಿಕಾಸ್ ಅವರನ್ನು ಕಾರಿನಿಂದ ಇಳಿಸಿ ಪತ್ನಿ ಮತ್ತು ಮಗನನ್ನು ಕಾರು ಸಮೇತ ಅಪಹರಿಸಿದ್ದಾರೆ. ಬಳಿಕ ಪಣಂಬೂರು ಬೀಚ್ ರಸ್ತೆ ಬಳಿ ವಿಕಾಸ್ ಅವರ ಪತ್ನಿ ಮತ್ತು ಮಗನ ಬಳಿಯಿದ್ದ ಚಿನ್ನಾಭರಣ, ಬೆಲೆಬಾಳುವ ವಸ್ತುಗಳು ದೋಚಿ ಅವರನ್ನು ರಸ್ತೆಯಲ್ಲಿ ತೊರೆದು ಕಾರು ಜೊತೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿ ಉದ್ಯಮಿ ವಿಕಾಸ್ ಅವರು ಪಣಂಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.


Spread the love
Subscribe
Notify of

0 Comments