ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ಸುನಿಲ್ ಕೆ.ಆರ್. ಖಂಡನೆ

Spread the love

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ಸುನಿಲ್ ಕೆ.ಆರ್. ಖಂಡನೆ

ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ ನಡೆಯಲಿರುವ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮಕ್ಕೆ ಆಗಮಿಸಲಿದ್ದ ಬಜರಂಗದಳದ ಪ್ರಮುಖರಾದ ಪುನೀತ್ ಅತ್ತಾವರ ಸೇರಿದಂತೆ ಹಿಂದೂ ಸಂಘಟನೆಗಳ ಪ್ರಮುಖರಿಗೆ ಉಡುಪಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿರುವ ಕ್ರಮವನ್ನು ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲೆ ತೀವ್ರವಾಗಿ ಖಂಡಿಸಿದೆ.

ದೇಶ ವಿಭಜನೆಯ ಇತಿಹಾಸವನ್ನು ಜನರಿಗೆ ತಿಳಿಸಿ, ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ. ಇಂತಹ ಕ್ರಮಗಳಿಂದ ಹಿಂದೂಗಳ ಧ್ವನಿಯನ್ನು ಅಡಗಿಸಿ, ಹಿಂದುತ್ವದ ಕಾರ್ಯದಿಂದ ವಿಮುಖರನ್ನಾಗಿಸಬಹುದು ಎಂಬುದು ಮೂರ್ಖತನ ಎಂದು ವಿಹಿಂಪ ತಿಳಿಸಿದೆ.

ಇಂತಹ ಹಲವು ನಿರ್ಬಂಧ ಹಾಗೂ ನಿಷೇಧಗಳನ್ನು ಎದುರಿಸಿಯೇ ವಿಶ್ವ ಹಿಂದೂ ಪರಿಷದ್ ದೇಶಾದ್ಯಂತ ತನ್ನ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದಿದೆ. ಹಿಂದೂ ವಿರೋಧಿ ಧೋರಣೆಗಳನ್ನು ಜಿಲ್ಲಾಡಳಿತ ಕೈಬಿಡಬೇಕು ಹಾಗೂ ವಿಧಿಸಿರುವ ನಿರ್ಬಂಧಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.

ಈ ಕುರಿತು ವಿಶ್ವ ಹಿಂದೂ ಪರಿಷತ್ತಿನ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments