Home Mangalorean News Kannada News ಸರ್ವ ಧರ್ಮಿಯರ ಉಪಸ್ಥಿತಿಯಲ್ಲಿ ಈಶ್ವರ್ ಮಲ್ಪೆ ಸ್ವಗೃಹ ನಿರ್ಮಾಣಕ್ಕೆ ಭೂಮಿ ಪೂಜೆ

ಸರ್ವ ಧರ್ಮಿಯರ ಉಪಸ್ಥಿತಿಯಲ್ಲಿ ಈಶ್ವರ್ ಮಲ್ಪೆ ಸ್ವಗೃಹ ನಿರ್ಮಾಣಕ್ಕೆ ಭೂಮಿ ಪೂಜೆ

Spread the love

ಸರ್ವ ಧರ್ಮಿಯರ ಉಪಸ್ಥಿತಿಯಲ್ಲಿ ಈಶ್ವರ್ ಮಲ್ಪೆ ಸ್ವಗೃಹ ನಿರ್ಮಾಣಕ್ಕೆ ಭೂಮಿ ಪೂಜೆ

ಮಲ್ಪೆ: ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ಸ್ವಗೃಹ ನಿರ್ಮಾಣದ ಭೂಮಿ ಪೂಜಾ ಕಾರ್ಯಕ್ರಮ ಸೋಮವಾರ ಅತ್ಯಂತ ಭಕ್ತಿಭಾವದಿಂದ ಹಾಗೂ ಸಡಗರದಿಂದ ನೆರವೇರಿತು.

ಈ ಪುಣ್ಯ ಸಂದರ್ಭದಲ್ಲಿ ಕೇಮಾರು ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ,ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರು ವಂ|ಡೆನಿಸ್ ಡೆಸಾ, ಮುಸ್ಲಿಂ ಧರ್ಮಗುರುಗಳು, ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ, ಡಾ. ಗಣನಾಥ್ ಎಕ್ಕಾರ್ ಹಾಗೂ ಸಮನ್ವಯ ಸರ್ವಧರ್ಮ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ವಿಶೇಷ ಗೌರವ ತಂದರು.

ಈ ಸಂದರ್ಭದಲ್ಲಿ ವಿವಿಧ ಧರ್ಮಗಳ ಗಣ್ಯರು ಒಂದೇ ವೇದಿಕೆಯಲ್ಲಿ ಸೇರಿ ಏಕತೆ, ಸಹಕಾರ ಮತ್ತು ಸೌಹಾರ್ದತೆಯ ಸಂದೇಶವನ್ನು ಹರಡಿದರು. ಭಕ್ತಿ, ಪರಂಪರೆ ಮತ್ತು ಸಮಾನತೆಯ ಸಂಕೇತವಾಗಿ ನಡೆದ ಈ ಕಾರ್ಯಕ್ರಮವು ಎಲ್ಲರ ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿತು. ಭವಿಷ್ಯದಲ್ಲಿ ನಿರ್ಮಾಣವಾಗಲಿರುವ ಈ ಗೃಹವು ಸಂತೋಷ, ಸಮೃದ್ಧಿ ಮತ್ತು ಶಾಂತಿಯ ನಿಲಯವಾಗಲಿ ಎಂದು ಉಪಸ್ಥಿತರಿದ್ದ ಎಲ್ಲಾ ಗಣ್ಯರು ಶುಭ ಹಾರೈಸಿದರು

ಈಶ್ವರ್ ಮಲ್ಪೆ ತಂಡದ ಸದಸ್ಯರು ಹಾಗೂ ಅಭಿಮಾನಿ ವರ್ಗ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಕೈಜೋಡಿಸಿದರು.


Spread the love

Exit mobile version