Home Mangalorean News Kannada News ವಿದ್ಯಾರ್ಥಿಗಳ ಹಾಗೂ ಯುವ ಜನತೆ ವಿರೋಧಿ ಬಿಜೆಪಿ ಪಕ್ಷ: ಕೆ. ವಿಕಾಸ್ ಹೆಗ್ಡೆ ಆಕ್ರೋಶ

ವಿದ್ಯಾರ್ಥಿಗಳ ಹಾಗೂ ಯುವ ಜನತೆ ವಿರೋಧಿ ಬಿಜೆಪಿ ಪಕ್ಷ: ಕೆ. ವಿಕಾಸ್ ಹೆಗ್ಡೆ ಆಕ್ರೋಶ

Spread the love

ವಿದ್ಯಾರ್ಥಿಗಳ ಹಾಗೂ ಯುವ ಜನತೆ ವಿರೋಧಿ ಬಿಜೆಪಿ ಪಕ್ಷ: ಕೆ. ವಿಕಾಸ್ ಹೆಗ್ಡೆ ಆಕ್ರೋಶ

ದೇಶದ ರಾಜಧಾನಿಯಲ್ಲಿ ನ್ಯಾಯಕ್ಕಾಗಿ ನ್ಯಾಯಯುತ ಹೋರಾಟ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಯುವ ಜನತೆಯನ್ನು ಅತ್ಯಂತ ಅಮಾನುಷವಾಗಿ ನಡೆಸಿಕೊಳ್ಳುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಎನ್ ಡಿ ಎ ಸರ್ಕಾರದ ನಡೆ ಯುವಜನ ವಿರೋಧಿ ಹಾಗೂ ಸರ್ವಾಧಿಕಾರಿ ನಡೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕರು ಬಾಯಿ ತೆಗೆದರೆ ತಾವು ಯುವ ಜನತೆಯ, ವಿದ್ಯಾರ್ಥಿಗಳ ಪರ ಎನ್ನುವುದು, ಇನ್ನೊಂದು ಕಡೆ ದೇಶದ ಪ್ರಧಾನಿ ಭೇಟಿ ಪಡಾವೋ, ಭೇಟಿ ಭಚಾವೋ ಎನ್ನುವುದು ಆದರೆ ಇಂದು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ, ವಿದ್ಯಾರ್ಥಿಗಳ ಆತ್ಮಹತ್ಯೆಗಳ ವಿರುದ್ಧ ಯುವ ಜನತೆ ಹಾಗೂ ವಿದ್ಯಾರ್ಥಿಗಳು ನ್ಯಾಯಕೋರಿ ಬೀದಿಗೆ ಇಳಿದು ಹೋರಾಟ ಮಾಡುತ್ತಿದ್ದರೆ, ಕನಿಷ್ಠ ಅವರ ಬೇಡಿಕೆಯಾದ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ರಾಜೀನಾಮೆ ಕೇಳಿ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸಬೇಕಾದ ಪ್ರಧಾನಿ ನರೇಂದ್ರ ಮೋದಿಯವರು ವಿದೇಶಿ ಪ್ರವಾಸದಲ್ಲಿ ತಲ್ಲಿನರಾಗಿರುವುದು ದೇಶದ ಸಾರ್ವಕಾಲಿಕ ದುರಂತ. ದೇಶದ ಯುವ ಜನತೆ ಬಿಜೆಪಿಯವರು ವಿದ್ಯಾರ್ಥಿ ಸಮುದಾಯ ಹಾಗೂ ನಿರುದ್ಯೋಗಿ ಯುವಕರ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದನೆ ನೀಡದೆ ಇರುವ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು.

ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ದೇಶದಲ್ಲಿ ಯುವ ಜನತೆಯ ಪರವಾಗಿದ್ದ ಪಕ್ಷ ಇದ್ದರೆ ಅದು ಕಾಂಗ್ರೆಸ್ ಪಕ್ಷ. ಯುವಕರಿಗೆ ಮತದಾನ, ಶಿಕ್ಷಣ, ಉದ್ಯೋಗ, ಸಮಾನತೆ ಎಲ್ಲವನ್ನೂ ನೀಡಿದ ಪಕ್ಷ ಕಾಂಗ್ರೆಸ್ ಪಕ್ಷ. ಆದರೆ ಕೇವಲ ಭಾಷಣ ಮತ್ತು ಹೇಳಿಕೆಗಳ ಮೂಲಕ ಅಧಿಕಾರಕ್ಕೆ ಬಂದು ವಿದ್ಯಾರ್ಥಿಗಳಿಗೆ ಹಾಗೂ ಯುವ ಜನತೆಗೆ ದ್ರೋಹ ಮಾಡಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿ ಹಾಗೂ ಯುವ ಸಮುದಾಯ ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.


Spread the love

Exit mobile version