Home Mangalorean News Kannada News ನಾಪತ್ತೆಯಾದ ಕೊಣಾಜೆ ನಿವಾಸಿ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆ

ನಾಪತ್ತೆಯಾದ ಕೊಣಾಜೆ ನಿವಾಸಿ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆ

Spread the love

ನಾಪತ್ತೆಯಾದ ಕೊಣಾಜೆ ನಿವಾಸಿ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆ

ಉಳ್ಳಾಲ: ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.

ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತದೇಹ ಪತ್ತೆಯಾಗಿದೆ.

ಸೋಮೇಶ್ವರ ಕೆರೆಯಲ್ಲಿ ವಿವೇಕ್ ಶೆಟ್ಟಿಗಾರ್ ಅವರ ಮೃತದೇಹ ಪತ್ತೆಯಾಗಿದೆ. ಮಾಹಿತಿ ಪ್ರಕಾರ, ನಾಪತ್ತೆಯಾದ ದಿನವೇ ವಿವೇಕ್ ತಮ್ಮ ಸ್ಕೂಟರನ್ನು ಸೋಮೇಶ್ವರ ರಥದ ಕೊಠಡಿ ಸಮೀಪ ನಿಲ್ಲಿಸಿದ್ದು ಕಂಡುಬಂದಿದೆ. ಅಲ್ಲಿಯೇ ಅವರ ಮೊಬೈಲ್ ಫೋನ್ ಹಾಗೂ ಚಪ್ಪಲಿಗಳನ್ನು ಇಟ್ಟು ಅವರು ಕಾಣೆಯಾಗಿರುವುದು ತಿಳಿದುಬಂದಿದೆ.

ವಿವೇಕ್ ಶೆಟ್ಟಿಗಾರ್ ಅವರು ಸುಮಾರು ಎಂಟು ತಿಂಗಳ ಹಿಂದೆ ತಮ್ಮ ಪತ್ನಿಗೆ ವಿಚ್ಛೇದನ ನೀಡಿದ್ದರೆಂದು ಮೂಲಗಳು ತಿಳಿಸಿವೆ.

ದೂರಿನ ಪ್ರಕಾರ, ವಿವೇಕ್ ಶೆಟ್ಟಿಗಾರ್ ಅವರು ಮಂಗಳೂರಿನ ಕದ್ರಿ ಬಳಿ ಇರುವ ವೇದ ಮೊರ್ಟಾಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಕೆಲಸಕ್ಕೆ ತೆರಳಿ ರಾತ್ರಿ 9 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದರು. ಅದರಂತೆ ಮಾರ್ಚ್ 9ರಂದು ಬೆಳಿಗ್ಗೆ 11 ಗಂಟೆಗೆ ಕೆಲಸಕ್ಕೆ ತೆರಳಿದ್ದ ವಿವೇಕ್ ರಾತ್ರಿ ಸುಮಾರು 9.30ಕ್ಕೆ ತಾಯಿಗೆ ದೂರವಾಣಿ ಕರೆ ಮಾಡಿ ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ತಿಳಿಸಿ ಮನೆಗೆ ಬರಲು ತಡವಾಗಬಹುದು, ನನ್ನಿಗಾಗಿ ಕಾಯಬೇಡಿ ಎಂದು ಹೇಳಿದ್ದರು.

ಆದರೆ ರಾತ್ರಿ 12 ಗಂಟೆಯಾದರೂ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅವರ ಮೊಬೈಲ್‌ಗೆ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿಲ್ಲ. ಮರುದಿನ ಮಾರ್ಚ್ 10ರಂದು ಕೂಡ ಮೊಬೈಲ್‌ಗೆ ಕರೆ ಮಾಡಿದಾಗ ಸಂಪರ್ಕವಾಗಿರಲಿಲ್ಲ. ಬಳಿಕ ವಿವೇಕ್ ಕೆಲಸ ಮಾಡುತ್ತಿದ್ದ ಕಂಪೆನಿಗೆ ಕರೆ ಮಾಡಿ ವಿಚಾರಿಸಿದಾಗ ಕಂಪೆನಿ ಬಂದ್ ಆಗಿರುವುದಾಗಿ ತಿಳಿದುಬಂದಿದೆ.

ನಂತರ ಕುಟುಂಬಸ್ಥರು ಹಾಗೂ ಪರಿಚಿತರ ಬಳಿ ವಿಚಾರಿಸಿದರೂ ವಿವೇಕ್ ಶೆಟ್ಟಿಗಾರ್ ಅವರ ಬಗ್ಗೆ ಯಾವುದೇ ಮಾಹಿತಿ ಸಿಗದೇ ಇದ್ದುದರಿಂದ ಅವರು ಕಾಣೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮೊ.ನಂ. 21/2026ರಂತೆ ಗಂಡಸು ಕಾಣೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದರು.


Spread the love

Exit mobile version