ಬ್ರಹ್ಮಾವರ| ರಾಹುಲ್ ಗಾಂಧಿ ಜನ್ಮದಿನ: ಹಿರಿಯ ಕಾರ್ಯಕರ್ತರಿಗೆ ಸನ್ಮಾನ, ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ
ಬ್ರಹ್ಮಾವರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನಾಚರಣೆಯ ಅಂಗವಾಗಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಉಡುಪಿ ವಿಧಾನಸಭಾ ಕ್ಷೇತ್ರದ ವತಿಯಿಂದ ಜೂನ್ 19ರಂದು ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬ್ರಹ್ಮಾವರದ ಕಾಂಗ್ರೆಸ್ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪಕ್ಷದ ಬೆಳವಣಿಗೆಗಾಗಿ ದೀರ್ಘಕಾಲ ಸೇವೆ ಸಲ್ಲಿಸಿರುವ ಹಿರಿಯ ಕಾರ್ಯಕರ್ತರನ್ನು ಗುರುತಿಸಿ ಸನ್ಮಾನಿಸಲಾಗುವುದು.
ಇದೇ ಸಂದರ್ಭದಲ್ಲಿ ಸಾರ್ವಜನಿಕ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಸ್ವಚ್ಛತಾ ಕಾರ್ಮಿಕರಿಗೆ ಅಗತ್ಯ ವಸ್ತುಗಳ ಕಿಟ್ಗಳನ್ನು ವಿತರಿಸಲಾಗುವುದು. ಅಲ್ಲದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು–ಹಂಪಲು ವಿತರಿಸುವ ಕಾರ್ಯಕ್ರಮವೂ ನಡೆಯಲಿದೆ.
ರಾಹುಲ್ ಗಾಂಧಿ ಅವರ ಜನ್ಮದಿನವನ್ನು ಸೇವಾ ಚಟುವಟಿಕೆಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
