ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪ್ರಮುಖ ಆರೋಪಿಗೆ ಪೊಲೀಸರಿಂದ ಗುಂಡೇಟು!

Spread the love

ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪ್ರಮುಖ ಆರೋಪಿಗೆ ಪೊಲೀಸರಿಂದ ಗುಂಡೇಟು!

ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ರಾಜು ಎಂಬಾತನಿಗೆ ಪೊಲೀಸರು ಗುಂಡೇಟು ಹಾರಿಸಿರುವ ಘಟನೆ ಉಡುಪಿ ಜಿಲ್ಲೆಯ ಗಡಿಭಾಗದ ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ನಡೆದಿದೆ.

ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು.

ಆರೋಪಿಯನ್ನು ಕಾಪು ಪಿಎಸ್ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಒತ್ತಿನೆಣೆ ಪೋಲಿಸರಿಗೆ ಹಲ್ಲೆ ನಡೆಸಿ ಅರೋಪಿ ರಾಜು ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಕಾಪು ಪಿಎಸ್ಐ ತೇಜಸ್ವಿಯವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ರಾಜುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ವೇಳೆ ಎಸ್ಐ ತೇಜಸ್ವಿ ಅವರಿಗೂ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಗೆ ಉಡುಪಿ ಎಸ್ ಹರಿರಾಮ್ ಶಂಕರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಪೊಲೀಸರ ಕಾರ್ಯಾಚರಣೆ ವೇಳೆ ಪರಾರಿಯಾದ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಹಾಗೂ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ಚಲನವಲನದ ಕುರಿತು ತನಿಖೆ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಇತರ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.


Spread the love
Subscribe
Notify of

0 Comments