ಕದ್ರಿ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

Spread the love

ಕದ್ರಿ ದೇವಸ್ಥಾನಕ್ಕೆ ಸಿಎಂ ಡಿಕೆಶಿವಕುಮಾರ್ ಭೇಟಿ

ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ವಿವಿಧ ಕಲಾತಂಡಗಳ ಮೂಲಕ ಸಿಎಂಗೆ ಭವ್ಯ ಸ್ವಾಗತ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಪುಟ ಸಚಿವರು ಸೇರಿದಂತೆ ಹಲವು ಗಣ್ಯರು ಕದ್ರಿ ದೇವಸ್ಥಾನದಲ್ಲಿ ಉಪಸ್ಥಿತರಿದ್ದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಶ್ರೀ ಮಂಜುನಾಥ ಸ್ವಾಮಿಗೆ ರುದ್ರಾಭಿಷೇಕ ನೆರವೇರಿಸಲಾಯಿತು.

ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವತಿಯಿಂದ ಮಧ್ಯಾಹ್ನದ ಅನ್ನದಾನ ಸೇವೆ ನಡೆಯಿತು.

YouTube player

Spread the love
Subscribe
Notify of

0 Comments