ಕಾರ್ಕಳ: 24 ಗಂಟೆಯೊಳಗೆ ಮನೆ ಕಳವು ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ

Spread the love

ಕಾರ್ಕಳ: 24 ಗಂಟೆಯೊಳಗೆ ಮನೆ ಕಳವು ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ

ಕಾರ್ಕಳ: ಮನೆ ಕಳವು ಪ್ರಕರಣವನ್ನು ಕಾರ್ಕಳ ನಗರ ಪೊಲೀಸರು 24 ಗಂಟೆಯೊಳಗೆ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಏಪ್ರಿಲ್ 23 ರ ಬೆಳಿಗ್ಗೆ 9.10 ಗಂಟೆಯಿಂದ ಏ 24ರ ಸಂಜೆ 6.00 ಗಂಟೆಯ ಅವಧಿಯಲ್ಲಿ ಕಳ್ಳರು ಪತ್ತೊಂಜಿ ಕಟ್ಟೆಯ ಶಂಕರ ಕುಲಾಲ್ ಅವರ ಮನೆಯ ಬಾಗಿಲು ಮೀಟಿ ಒಳನುಗ್ಗಿ ಕಪಾಟಿನಲ್ಲಿದ್ದ ಸುಮಾರು 24 ಗ್ರಾಂ ತೂಕದ ಚಿನ್ನದ ನೆಕ್ಲೆಸ್, 3 ಚಿನ್ನದ ಉಂಗುರಗಳು, ಒಂದು ಜೋಡಿ ಬೆಂಡೋಲೆ, ಒಂದು ಜೋಡಿ ಜುಮ್ಕಿ ಸೇರಿದಂತೆ ಒಟ್ಟು ಸುಮಾರು 2.64 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು.

ಈ ಸಂಬಂಧ ಶಂಕರ ಕುಲಾಲ್ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾರ್ಕಳ ಉಪವಿಭಾಗದ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ಆರ್., ಪಿಎಸ್ಐ ಮುರುಳೀಧರ ನಾಯ್ಕ, ಶಿವಕುಮಾರ್ ಎಸ್.ಆರ್. ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಾದ 24 ಗಂಟೆಯೊಳಗೆ ಆರೋಪಿಯಾದ ಆನಂದ ಕುಲಾಲ್ (40), ಬೈರಂಪಳ್ಳಿ ಗ್ರಾಮ ನಿವಾಸಿಯನ್ನು ಬಂಧಿಸಿದೆ. ಇದಲ್ಲದೆ ಕಳವು ಚಿನ್ನವನ್ನು ಮಾರಾಟ ಮಾಡಿದ್ದ ಜಯರಾಮ ಆಚಾರ್ಯ (54), ಕೈಕಂಬ ಅಜೆಕಾರು ಮರ್ಣೆ ಗ್ರಾಮದ ನಿವಾಸಿಯನ್ನು ಸಹ ಬಂಧಿಸಲಾಗಿದೆ.

ಆರೋಪಿತರಿಂದ ಕಳವಾದ ಸುಮಾರು 5.60 ಲಕ್ಷ ರೂ. ಮೌಲ್ಯದ 39 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments