Home Mangalorean News Kannada News ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

Spread the love

ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

  • ಸರ್ವಜ್ಞನಗರ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ, ಶಾಲಾ ಕೊಠಡಿ ಉದ್ಘಾಟನೆ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ಥೀಮ್ ಪಾರ್ಕ್ ಕಾಮಗಾರಿಯನ್ನು ಏಪ್ರಿಲ್ ಒಳಗಾಗಿ ಪೂರ್ಣಗೊಳಿಸುವಂತೆ ಇಂಧನ ಸಚಿವರೂ ಆಗಿರುವ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅವರು ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.

 

ಸರ್ವಜ್ಞನಗರ ಕ್ಷೇತ್ರದಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳನ್ನು ಶುಕ್ರವಾರ ಪರಿಶೀಲನೆ ನಡೆಸಿದ ಇಂಧನ ಸಚಿವರು, “ಹೆಚ್.ಬಿ.ಆರ್. ಲೇಔಟ್‌ನ 5ನೇ ಬ್ಲಾಕ್‌ನ ಕೆಪಿಟಿಸಿಎಲ್ ಸ್ಟೇಷನ್ ಬಳಿ ನಿರ್ಮಾಣಗೊಳ್ಳುತ್ತಿರುವ ಥೀಮ್ ಪಾರ್ಕ್ ಗೂ ಭೇಟಿ ನೀಡಿದರಲ್ಲದೆ, ಗುಣಮಟ್ಟದ ಕಾಮಗಾರಿ ನಡೆಸುವುದರ ಜತೆಗೆ ತ್ವರಿತವಾಗಿ ಕೆಲಸ ಮುಗಿಸಬೇಕು. ಸಮಾಜಕ್ಕೆ ಹಸಿರಿನ ಮಹತ್ವ ತಿಳಿಸುವ ಉದ್ದೇಶದಿಂದ ನಿರ್ಮಾಣಗೊಳ್ಳುತ್ತಿರುವ ಈ ಥೀಮ್ ಪಾರ್ಕ್ ಕ್ಷೇತ್ರಕ್ಕೆ ಮಾತ್ರವಲ್ಲ, ರಾಜ್ಯದಲ್ಲೂ ಮಾದರಿಯಾಗಿರಬೇಕು,” ಎಂದರು.

“ಕೆಪಿಟಿಸಿಎಲ್ ನ ಜನಪರ ಬದ್ಧತೆಯನ್ನು ಸಾರುವ ಉದ್ದೇಶದಿಂದ ಈ ಥೀಮ್ ಪಾರ್ಕ್ ನಿರ್ಮಿಸಲಾಗುತ್ತಿದೆ. ಇಲ್ಲಿ ತರಬೇತಿ ಕೇಂದ್ರ, ಗ್ರಾಮೀಣ ಆಟಗಳನ್ನು ಪ್ರೋತ್ಸಾಹಿಸುವ ಕೇಂದ್ರ, ಬಯಲು ರಂಗಮಂದಿರ, ವಾಕಿಂಗ್ ಪಾಥ್ ಹಾಗೂ ಓಪನ್ ಜಿಮ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕ, ಶೌಚಾಲಯ ವ್ಯವಸ್ಥೆ, ಮ್ಯಾಪಿಂಗ್ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ರೂಪಿಸಬೇಕು,” ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.

ನೀರು ಸರಬರಾಜು ಯೋಜನೆ
ಸರ್ವಜ್ಞನಗರ ಕ್ಷೇತ್ರ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಕಳೆದ ಹಲವು ವರ್ಷಗಳಿಂದ ಇರುವ ನೀರಿನ ಸಮಸ್ಯೆ ಬಗೆಹರಿಸಲು ಮತ್ತು ನೀರು ಸರಬರಾಜು ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹೆಚ್.ಬಿ.ಆರ್. ಲೇಔಟ್‌ 1ನೇ ಬ್ಲಾಕ್‌, ಸುಬ್ಬಯ್ಯ ಲೇಔಟ್ 1ನೇ ಮುಖ್ಯರಸ್ತೆಯ ಸಮೀಪ ಅಳವಡಿಸಲಾಗುತ್ತಿರುವ 600 ಎಂಎಂ ಎಂ.ಎಸ್ ನೀರಿನ ಪೈಪ್‌ಲೈನ್ ಯೋಜನೆಯನ್ನು ಪರಿಶೀಲಿಸಿದ ಸಚಿವ ಜಾರ್ಜ್, ಜಲ ಮಂಡಳಿ ಅಧಿಕಾರಿಗಳಿಂದ ಈ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದು ತ್ವರಿತವಾಗಿ ಕೆಲಸ ಮುಂದುವರಿಸುಂತೆ ಸೂಚಿಸಿದರು.

ಶಾಲಾ ಕೊಠಡಿ ಮತ್ತು ಊಟದ ಕೊಠಡಿ ಉದ್ಘಾಟನೆ
ಇದೇ ವೇಳೆ ಸಚಿವರು ತಮ್ಮ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಹೆಚ್‌‌.ಬಿ.ಆರ್. ವಾರ್ಡ್ ಸಂಖ್ಯೆ.78 ರಲ್ಲಿರುವ ಕಾಡುಗೊಂಡನಹಳ್ಳಿ ಸರ್ಕಾರಿ ಕನ್ನಡ ಮಾದರಿ ಪಾಠಶಾಲೆಯಲ್ಲಿ ನಿರ್ಮಿಸಿರುವ ಕೊಠಡಿ ಹಾಗೂ ಊಟದ ಕೊಠಡಿಯನ್ನು ಉದ್ಘಾಟಿಸಿದರು.

ಅಲ್ಲದೆ, ವೀರಣ್ಣಪಾಳ್ಯ ಮುಖ್ಯರಸ್ತೆ ಮತ್ತು 4ನೇ ಅಡ್ಡರಸ್ತೆ-ಇಂದಿರಾ ಕ್ಯಾಂಟೀನ್ ರಸ್ತೆ ಮತ್ತು ನಾಗಾವರ ಮುಖ್ಯರಸ್ತೆಯಿಂದ ರೈಲ್ವೆ ಗೇಟ್‌ವರೆಗಿನ ವಿನಾಯಕ ದೇವಸ್ಥಾನದ ರಸ್ತೆಗಳ ಸಮಗ್ರ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅನುದಾನದಡಿಯಲ್ಲಿ ಮಂಜೂರು ಮಾಡಲಾದ ರಸ್ತೆ ಕಾಮಗಾರಿಗಳಿಗೆ ಸಚಿವರು ಗುದ್ದಲಿ ಪೂಜೆ ನೆರವೇರೆಸಿದರು. ಜತೆಗೆ ಗೋವಿಂದಪುರ ಮುಖ್ಯರಸ್ತೆ ಮತ್ತು ನೆಹರು ರಸ್ತೆ, ಹೆಣ್ಣೂರು ರಸ್ತೆಯಿಂದ ಕುಲ್ಲಪ್ಪ ವೃತ್ತದವರೆಗೆ ಪ್ರಗತಿಯಲ್ಲಿರುವ ಪಾದಚಾರಿ ಮಾರ್ಗ ಹಾಗೂ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಜಲಸುಸ್ಥಿರತೆಗೆ ಕೊಡುಗೆ ನೀಡುತ್ತಿರುವ ಬಾಣಸವಾಡಿ ಕೆರೆ

ಕ್ಷೇತ್ರದಲ್ಲಿ ಭವಿಷ್ಯದ ಜಲಸುಸ್ಥಿರತೆಗೆ ಕೊಡುಗೆ ನೀಡುತ್ತಿರುವ ಬಾಣಸವಾಡಿ ಕೆರೆಯ ಪುನಶ್ಚೇತನ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಕೆರೆಯು ಬೆಂಗಳೂರು ಮಹಾನಗರದ ಪ್ರಮುಖ ಕೆರೆಗಳಲ್ಲೊಂದಾಗಿದ್ದು, ಕೆರೆಯ ಪುನಶ್ಚೇತನ ಹಾಗೂ ಅಭಿವೃದ್ಧಿಯು, ಭವಿಷ್ಯದಲ್ಲಿ ನಗರಕ್ಕೆ ನೀರಿನ ಕೊರತೆ ಬಾರದಂತೆ ಕೊಡುಗೆ ನೀಡಲಿದೆ‌ ಎಂದು ತಿಳಿಸಿದರು.

ಒಳಚರಂಡಿ ವ್ಯವಸ್ಥೆಯ ಪುನಶ್ಚೇತನ ಕಾಮಗಾರಿಗೆ ಚಾಲನೆ

ಬಳಿಕ ಹೆಚ್‌ಆರ್‌ಬಿ‌ಆರ್ ಲೇಔಟ್‌ 1 ನೇ ಬ್ಲಾಕ್ 8ನೇ ಮುಖ್ಯರಸ್ತೆಯ ಸಮೀಪದಲ್ಲಿ ಒಳಚರಂಡಿ ವ್ಯವಸ್ಥೆಯ ಪುನಶ್ಚೇತನ ಕಾಮಗಾರಿಗೆ ಚಾಲನೆ ನೀಡಿದ ಸಚಿವರು, ಸಮರ್ಪಕ ಒಳಚರಂಡಿ ವ್ಯವಸ್ಥೆ ಹಾಗೂ ನೀರಿನ ಸರಾಗ ಹರಿವಿಗೆ ಅನುಕೂಲವಾಗುವಂತೆ ಚರಂಡಿ ವ್ಯವಸ್ಥೆಯನ್ನು ಪರಿಷ್ಕರಿಸಲಾಗುತ್ತಿದ್ದು, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಾದ್ಯಂತ ಒಳಚರಂಡಿ‌ ಮೂಲಸೌಕರ್ಯ ಹಾಗೂ ನೈರ್ಮಲ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಬಾಣಸವಾಡಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭ
ಬಾಣಸವಾಡಿ ಮುಖ್ಯ ರಸ್ತೆಯ ಸಮೀಪ ನೂತನವಾಗಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕ (ಆರ್‌ಓ ಪ್ಲಾಂಟ್) ಉದ್ಘಾಟಿಸಿದ ಸಚಿವರು, ಕ್ಷೇತ್ರದ ಜನತೆಯ ಉತ್ತಮ ಆರೋಗ್ಯಕ್ಕಾಗಿ, ಶುದ್ಧ ಕುಡಿಯುವ ನೀರಿನ ಮೂಲಸೌಕರ್ಯವನ್ನುಕಲ್ಪಿಸಲಾಗುತ್ತಿದ್ದು, ಅತ್ಯುತ್ತಮ ಗುಣಮಟ್ಟದ ನೀರು ಜನತೆಗೆ ಲಭ್ಯವಾಗುತ್ತಿದೆ‌ ಎಂದು ತಿಳಿಸಿದರು.

ಕ್ರೀಡಾ ಸಂಕೀರ್ಣ ಉನ್ನತೀಕರಣ ಪರಿಶೀಲನೆ
ಕ್ಷೇತ್ರದ ಯುವಜನತೆಗೆ ಹಾಗೂ ಕ್ರೀಡಾಪಟುಗಳಿಗೆ ಅನುಕೂಲವಾಗುವಂತೆ, ಕ್ಷೇತ್ರದ ಓಎಂಬಿಆರ್ ಲೇಔಟ್‌ನಲ್ಲಿನ ಆಟದ ಮೈದಾನದಲ್ಲಿ ಉನ್ನತೀಕರಣಗೊಳ್ಳುತ್ತಿರುವ ಕ್ರೀಡಾ ಸಂಕೀರ್ಣ ಹಾಗೂ ಇನ್ನಿತರ ಮೂಲಸೌಕರ್ಯ ವ್ಯವಸ್ಥೆಗಳ ಕಾಮಗಾರಿಗಳನ್ನು ಇದೇ ವೇಳೆ ಇಂಧನ ಸಚಿವರು ಪರಿಶೀಲಿಸಿದರು. ಕ್ರೀಡಾ ಸಂಕೀರ್ಣದ ಕಾಮಗಾರಿ ಹಲವು ವರ್ಷಗಳಿಂದ ನಡೆಯುತ್ತಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ತ್ವರಿತವಾಗಿ ಕೆಲಸ ಮುಗಿಸಿ ಅದನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು ಎಂದು ಬಿಡಿಎ ಆಯುಕ್ತರು ಹಾಗೂ ಇತರೆ ಅಧಿಕಾರಿಗಳಿಗೆ ತಾಕೀತು ಮಾಡಿದರು.


Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version