ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ಸತತ 10ನೇ ಬಾರಿಗೆ ಸಾಧನಾ ಪ್ರಶಸ್ತಿ

Spread the love

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ಸತತ 10ನೇ ಬಾರಿಗೆ ಸಾಧನಾ ಪ್ರಶಸ್ತಿ

ಉಡುಪಿ: ಕರಾವಳಿಯ ಪ್ರತಿಷ್ಠಿತ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ 2025-26 ನೇ ಸಾಲಿನ ಸರ್ವತೋಮುಖ ಸಾಧನೆಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸತತ 10ನೇ ಬಾರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಬ್ಯಾಂಕ್ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಯಶ್ಪಾಲ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ಪ್ರಸಕ್ತ ಸಾಲಿನಲ್ಲಿ ರೂ. 1,200 ಕೋಟಿಗೂ ಮಿಕ್ಕಿ ಒಟ್ಟು ವ್ಯವಹಾರ ನಡೆಸಿದ್ದು, ಕರಾವಳಿ ಭಾಗದ ಅತೀ ಹೆಚ್ಚು ಡಿವಿಡೆಂಡ್ ನೀಡುವ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸುಸಜ್ಜಿತ ಶಾಖೆಗಳ ಮೂಲಕ ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಾ ಸರ್ವಾಂಗೀಣ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ಕಾರ್ಯವೈಖರಿಗೆ ಈ ಬಾರಿಯ ಪ್ರತಿಷ್ಟಿತ ಸಾಧನಾ ಪ್ರಶಸ್ತಿಯ ಮೂಲಕ ಗೌರವಿಸಲಾಗಿದೆ.


Spread the love
Subscribe
Notify of

0 Comments