ಟೀಮ್ ಬಿ – ಹ್ಯೂಮನ್ ನಿಂದ ಪುತ್ತೂರಿನಲ್ಲಿ ರಂಝಾನ್ ಕಿಟ್ ವಿತರಣೆ

ಟೀಮ್ ಬಿ - ಹ್ಯೂಮನ್ ನಿಂದ ಪುತ್ತೂರಿನಲ್ಲಿ ರಂಝಾನ್ ಕಿಟ್ ವಿತರಣೆ ಪುತ್ತೂರು: ಕಳೆದ 47 ದಿನಗಳಿಂದ ಹಸಿದವರಿಗೆ ಅನ್ನ, ಮನೆ ಬಾಗಿಲಿಗೆ ದಿನಸಿ ಕಿಟ್ ಮತ್ತು ರಂಝಾನ್ ಕಿಟ್ ಗಳನ್ನು ತಲುಪಿಸುವಲ್ಲಿ ಅವಿರತಶ್ರಮ...

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು – ಸಸಿಕಾಂತ್ ಸೆಂಥಿಲ್

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಸಸಿಕಾಂತ್ ಸೆಂಥಿಲ್ ಮಂಗಳೂರು: ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ದತೆಮಾಡಿಕೊಳ್ಳಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮತದಾನ ಪ್ರಕ್ರಿಯೆಗೆ 8,920 ಸಿಬ್ಬಂದಿ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸಲು 8,920 ಸಿಬ್ಬಂದಿ ಸಿದ್ಧರಾಗಿದ್ದಾರೆ. ಸಿಬ್ಬಂದಿಯನ್ನು ವಿಧಾನ ಸಭಾ ಕ್ಷೇತ್ರಗಳಿಗೆ ತಲುಪಿಸಲು ಒಟ್ಟು 79 ವಾಹನಗಳು ಹಾಗೂ ವಿಧಾನ ಸಭಾ ಕ್ಷೇತ್ರಗಳಿಂದಸಂಬಂಧಪಟ್ಟ ಮತಗಟ್ಟೆಗಳಿಗೆ ತಲುಪಿಸಲು 668 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಇದುವರೆಗೆ 15 ವಾಹನಗಳು (1.08 ಕೋಟಿ ರೂ. ವೌಲ್ಯ) ಹಾಗೂ 31 ಲಕ್ಷ ರೂ. ನಗದನ್ನು ವಿವಿಧಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದರು. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಅವಧಿಯಲ್ಲಿ 84,285.10 ಲೀಟರ್ ಮದ್ಯ (94.55 ಲಕ್ಷ ರೂ. ವೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದರು. ಅಬಕಾರಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿ 587 ಪ್ರಕರಣಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುವಿಧಾ ಮೂಲಕ 584 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 520 ಪ್ರಕರಣಗಳನ್ನುಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು. ಇಂದು ಸಂಜೆ (ಎ.16) 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 6 ಗಂಟೆಯ ನಂತರ ಕ್ಷೇತ್ರದಿಂದ ಹೊರಗಿನ ಚುನಾವಣಾ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಈ ಬಗ್ಗೆ ಪರಿಶೀಲನೆನಡೆಸಲು ಮೇಲ್ವಿಚಾರಕರನ್ನು ಹೊಟೇಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗಿದೆ. ಅವಧಿ ಮೀರಿ ಹೊರ ಕ್ಷೇತ್ರಗಳ ಪ್ರಚಾರಕರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

ಮಂಗಳೂರು: ಸೆಲೂನ್‌ನಲ್ಲಿ ದಾಂಧಲೆ ಪ್ರಕರಣ: 14 ಮಂದಿ ಸೆರೆ

ಮಂಗಳೂರು: ಸೆಲೂನ್‌ನಲ್ಲಿ ದಾಂಧಲೆ ಪ್ರಕರಣ: 14 ಮಂದಿ ಸೆರೆ ಮಂಗಳೂರು: ನಗರದ ಬಿಜೈ ಕೆಎಸ್ಸಾರ್ಟಿಸಿ ಬಸ್ ತಂಗುದಾಣ ಬಳಿಯ ಯುನಿಸೆಕ್ಸ್ ಸೆಲೂನ್‌ವೊಂದಕ್ಕೆ ಗುರುವಾರ ಮಧ್ಯಾಹ್ನ ನುಗ್ಗಿ ದಾಂಧಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 14 ಮಂದಿಯನ್ನು...

ಕರಂಗಲ್ಪಾಡಿ ಮುಖ್ಯ ರಸ್ತೆಯ ಡ್ರೈನೇಜ್ ಕಾಮಗಾರಿಗೆ ಚಾಲನೆ

ಕರಂಗಲ್ಪಾಡಿ ಮುಖ್ಯ ರಸ್ತೆಯ ಡ್ರೈನೇಜ್ ಕಾಮಗಾರಿಗೆ ಚಾಲನೆ ಮಂಗಳೂರು : ಬಹಳ ಸಮಯದಿಂದ ಕರಂಗಲ್ಪಾಡಿ ಮುಖ್ಯ ರಸ್ತೆಯಲ್ಲಿ ಡ್ರೈನೇಜ್ ನೀರು ರಸ್ತೆಗೆ ಹರಿದು ಬಂದು ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿತ್ತು. ರಸ್ತೆಯ ಬದಿಯಲ್ಲಿರುವ ಕಟ್ಟಡದಲ್ಲಿ ವ್ಯಾಪಾರಸ್ಥರಿಂದ...

ಭವಿಷ್ಯವನ್ನು ರೂಪಿಸುವ ತಾಂತ್ರಿಕ ಶಿಕ್ಷಣದ ಅವಶ್ಯಕತೆ ಇದೆ: ಫ್ರಾನ್ಸಿಸ್ ಕರ್ನೆಲಿಯೋ 

ಭವಿಷ್ಯವನ್ನು ರೂಪಿಸುವ ತಾಂತ್ರಿಕ ಶಿಕ್ಷಣದ ಅವಶ್ಯಕತೆ ಇದೆ: ಫ್ರಾನ್ಸಿಸ್ ಕರ್ನೆಲಿಯೋ  ನಾಡ ಐಟಿಐ ಸಂಸ್ಥೆಯಲ್ಲಿ ಘಟಿಕೋತ್ಸವ ಕುಂದಾಪುರ: ಆಧುನಿಕ ಜಗತ್ತಿನಲ್ಲಿ ಭವಿಷ್ಯವನ್ನು ಕಟ್ಟಿಕೊಳ್ಳುವ ವೃತ್ತಿಪರತೆಯನ್ನು ಹೊಂದಲು ತಾಂತ್ರಿಕ ಶಿಕ್ಷಣದ ಆಯ್ಕೆ ಒಳ್ಳೆಯ ಮಾರ್ಗ ಎಂದು...

ಸ್ನಾನಕ್ಕೆಂದು ನದಿಗೆ ತೆರಳಿದ್ದ ಸ್ನೇಹಿತರಿಬ್ಬರು ದಾರುಣ ಸಾವು!

ಸ್ನಾನಕ್ಕೆಂದು ನದಿಗೆ ತೆರಳಿದ್ದ ಸ್ನೇಹಿತರಿಬ್ಬರು ದಾರುಣ ಸಾವು! ಕುಂದಾಪುರ: ಸ್ನೇಹಿತರಿಬ್ಬರು ಸ್ನಾನಕ್ಕೆಂದು ನದಿಗೆ ತೆರಳಿದ ವೇಳೆ ಕಾಲುಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಭಾನುವಾರ ಮಧ್ಯಾಹ್ನ ತಾಲೂಕಿನ ಬೆಳ್ವೆಯಲ್ಲಿ ವರದಿಯಾಗಿದೆ. ಬೆಳ್ವೆ ಶ್ರೀಧರ...

ಮಸೀದಿ ಇಮಾಮರ ಗೌರವಧನ – ಕರ್ತವ್ಯ ದೃಢಪತ್ರ ನೀಡಲು ಸೂಚನೆ

ಮಸೀದಿ ಇಮಾಮರ ಗೌರವಧನ - ಕರ್ತವ್ಯ ದೃಢಪತ್ರ ನೀಡಲು ಸೂಚನೆ ಮಂಗಳೂರು : ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ಗೌರವಧನ ಪಡೆಯುತ್ತಿರುವ ಪೇಶ್ ಇಮಾಮ್ ಮತ್ತು ಮೌಝನ್ (ಮುಕ್ರಿ)ರವರು ಅಕ್ಟೋಬರ್ ತಿಂಗಳಿನಲ್ಲಿ ಕಾರ್ಯ...

ಕ್ರೈಂ ಮತ್ತು ಟ್ರಾಫಿಕ್ ಸುವ್ಯವಸ್ಥೆ ಡಿಸಿಪಿಯಾಗಿ ಉಮಾ ಪ್ರಶಾಂತ್ ಅಧಿಕಾರ ಸ್ವೀಕಾರ

ಕ್ರೈಂ ಮತ್ತು ಟ್ರಾಫಿಕ್ ಸುವ್ಯವಸ್ಥೆ ಡಿಸಿಪಿಯಾಗಿ ಉಮಾ ಪ್ರಶಾಂತ್ ಅಧಿಕಾರ ಸ್ವೀಕಾರ  ಮಂಗಳೂರು: ನಗರದಲ್ಲಿ ಖಾಲಿಯಾಗಿದ್ದ ಕ್ರೈಂ ಮತ್ತು ಟ್ರಾಫಿಕ್ ಸುವ್ಯವಸ್ಥೆ ಡಿಸಿಪಿ ಹುದ್ದೆಯನ್ನು ನೂತನ ಡಿಸಿಪಿಯಾಗಿ ಉಮಾಪ್ರಶಾಂತ್ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಈ...

ತಾಯಿ, ಮಕ್ಕಳ ಹತ್ಯೆ ಆರೋಪಿಯನ್ನು ಕೂಡಲೇ ಬಂಧಿಸಿ – ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ರಾವ್

ತಾಯಿ, ಮಕ್ಕಳ ಹತ್ಯೆ ಆರೋಪಿಯನ್ನು ಕೂಡಲೇ ಬಂಧಿಸಿ – ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ರಾವ್ ಉಡುಪಿ: ಉಡುಪಿ ಸಮೀಪದ ನೇಜಾರು ತೃಪ್ತಿ ಲೇ ಔಟ್ ನ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬ...

ಕಾವೂರು ಕಾಲೇಜಿನಲ್ಲಿ ಶೌಚಾಲಯ ಕಟ್ಟಡ ಉದ್ಘಾಟನೆ  

ಕಾವೂರು ಕಾಲೇಜಿನಲ್ಲಿ ಶೌಚಾಲಯ ಕಟ್ಟಡ ಉದ್ಘಾಟನೆ   ಮಂಗಳೂರು : ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಕಾವೂರು, ಮಂಗಳೂರು, ಇಲ್ಲಿ ಎಂಸಿಎಫ್ ವತಿಯಿಂದ 2.9 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಶೌಚಾಲಯದ ಉದ್ಘಾಟನಾ...

Members Login

Obituary

Congratulations