Home Mangalorean News Kannada News ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ: ಮಂಗಳೂರು ನಗರ ಪೊಲೀಸರಿಂದ ಜಾಗೃತಿ ಸಮಾರಂಭ

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ: ಮಂಗಳೂರು ನಗರ ಪೊಲೀಸರಿಂದ ಜಾಗೃತಿ ಸಮಾರಂಭ

Spread the love

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ: ಮಂಗಳೂರು ನಗರ ಪೊಲೀಸರಿಂದ ಜಾಗೃತಿ ಸಮಾರಂಭ

ಮಂಗಳೂರು: 2026ನೇ ಸಾಲಿನ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಮಂಗಳೂರು ನಗರ ಪೊಲೀಸ್ ವತಿಯಿಂದ ನಗರದ ಪುರಭವನದಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಶಾಲಾ–ಕಾಲೇಜು ವಿದ್ಯಾರ್ಥಿಗಳು, ಬಸ್ ಹಾಗೂ ಆಟೋ ಸಂಘಗಳ ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದರು.

ಸಮಾರಂಭದಲ್ಲಿ ಜೆಪ್ಪಿನಮೊಗೆರು ಯೆನೆಪೋಯಾ ಶಾಲೆಯ ವಿದ್ಯಾರ್ಥಿಗಳು ರಸ್ತೆ ಸುರಕ್ಷತೆ ಕುರಿತು ಬೀದಿ ನಾಟಕ ಪ್ರದರ್ಶಿಸಿ ಪ್ರೇಕ್ಷಕರಲ್ಲಿ ಜಾಗೃತಿ ಮೂಡಿಸಿದರು. ಅಲ್ಲದೆ, ಮಂಗಳೂರು ನಗರದಲ್ಲಿ ನಡೆದ ಕೆಲವು ಅಪಘಾತಗಳು ಲೈವ್ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಹಿಡಿದ ದೃಶ್ಯಾವಳಿಗಳನ್ನು ಪ್ರದರ್ಶಿಸಿ, ಸಂಚಾರ ನಿಯಮಗಳ ಪಾಲನೆಯ ಮಹತ್ವವನ್ನು ಮನವರಿಕೆ ಮಾಡಲಾಯಿತು.

ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸುಧೀರ್ ಕುಮಾರ್ ರೆಡ್ಡಿ ಐಪಿಎಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ತೆಲಿಕೆದ ಬೊಳ್ಳಿ ಡಾ. ಶ್ರೀ ದೇವದಾಸ್ ಕಾಪಿಕಾಡ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾನ್ಯ ನ್ಯಾಯಾಧೀಶೆ ಶ್ರೀಮತಿ ಜೈಬುನಿಸ್ಸಾ (ಡಿ.ಎಲ್.ಎಸ್.ಎ, ಮಂಗಳೂರು) ಹಾಗೂ ವಿಶೇಷ ಅತಿಥಿಗಳಾಗಿ ಡಾ. ಅರ್ಜುನ್ ಶೆಟ್ಟಿ (ಪ್ರೊಫೆಸರ್ ಮತ್ತು ಮುಖ್ಯಸ್ಥರು, ನ್ಯೂರೋಸರ್ಜರಿ ವಿಭಾಗ, ಕೆಎಂಸಿ) ಉಪಸ್ಥಿತರಿದ್ದರು. ಈ ಸಂದರ್ಭ ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಪಾಲನೆ ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮತ್ತು ಅರಿವು ನೀಡಲಾಯಿತು.

ಕಾರ್ಯಕ್ರಮದಲ್ಲಿ ನಗರದ ಸಂಚಾರ ಸುವ್ಯವಸ್ಥೆಗೆ ಶ್ಲಾಘನೀಯ ಸೇವೆ ಸಲ್ಲಿಸಿದ ಸಿಬ್ಬಂದಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ಜೊತೆಗೆ ವಿದ್ಯಾರ್ಥಿಗಳಿಗಾಗಿ ಸಂಚಾರ ನಿಯಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಅತಿ ಹೆಚ್ಚು ಅಪಘಾತಗಳು ಸಂಭವಿಸಿರುವ ಒಟ್ಟು 16 ಸ್ಥಳಗಳನ್ನು ‘ಬ್ಲಾಕ್ ಸ್ಪಾಟ್’ಗಳಾಗಿ ಗುರುತಿಸಲಾಗಿದ್ದು, ಈ ಪ್ರದೇಶಗಳಲ್ಲಿ 315 ಅಪಘಾತಗಳು ನಡೆದಿವೆ. ಈ ದುರ್ಘಟನೆಗಳಲ್ಲಿ 77 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಈ ಸ್ಥಳಗಳಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಕಾರಣವಾಗಿ ಸಾವು ಸಂಭವಿಸಿದಲ್ಲಿ, ಸಂಬಂಧಪಟ್ಟ ಚಾಲಕ ಅಥವಾ ಸವಾರರ ವಿರುದ್ಧ ಅಪರಾಧಿಕ ಮಾನವ ಹತ್ಯೆ (ಕಲಂ 105 ಬಿಎನ್ಎಸ್ – ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಮದ್ಯಪಾನ ಸ್ಥಿತಿಯಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಚಾಲನೆ ಮಾಡಿದರೆ ಜನರ ಜೀವಕ್ಕೆ ಅಪಾಯ ಉಂಟಾಗುತ್ತದೆ ಎಂಬ ಅರಿವು ಪ್ರತಿಯೊಬ್ಬ ಚಾಲಕರಿಗೂ ಇರಬೇಕು ಎಂದು ಅವರು ತಿಳಿಸಿದರು.

ಅಪಘಾತದಲ್ಲಿ ಕುಟುಂಬದ ಆಧಾರಸ್ತಂಭ ಮೃತಪಟ್ಟರೆ ಆ ಕುಟುಂಬ ಮಾನಸಿಕ, ಆರ್ಥಿಕ ಹಾಗೂ ಸಾಮಾಜಿಕ ಸಂಕಷ್ಟಕ್ಕೆ ಒಳಗಾಗುತ್ತದೆ ಎಂದು ವಿವರಿಸಿದ ಅವರು, ಪಾದಚಾರಿಗಳ ಸುರಕ್ಷತೆಗಾಗಿ ಹೆದ್ದಾರಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಸೆಂಟರ್ ಮೀಡಿಯನ್ ಅಳವಡಿಸುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಇದೇ ವೇಳೆ ನಟ ಡಾ. ಶ್ರೀ ದೇವದಾಸ್ ಕಾಪಿಕಾಡ್ ಅವರು, ವಾಹನ ಚಾಲಕರು, ಸವಾರರು ಹಾಗೂ ಪಾದಚಾರಿಗಳು ಎಚ್ಚರಿಕೆಯಿಂದ ಸಂಚರಿಸಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ತಮ್ಮ ಹಾಗೂ ಇತರರ ಸುರಕ್ಷತೆಯನ್ನು ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.

ನಗರ ಹಾಗೂ ನಗರದ ಸುತ್ತಮುತ್ತಲ ರಸ್ತೆಗಳಲ್ಲಿ ಒಟ್ಟು 28 ಸ್ಥಳಗಳಲ್ಲಿ 169 ಎಐ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಚಾಲಕರು ಮತ್ತು ಸವಾರರ ಮೇಲೆ ನಿಗಾ ವಹಿಸಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಕರ್ನಾಟಕ ರಾಜ್ಯದಲ್ಲಿ 2025ನೇ ಸಾಲಿನಲ್ಲಿ ದಾಖಲಾಗಿರುವ ರಸ್ತೆ ಅಪಘಾತಗಳ ಅಂಕಿ-ಅಂಶಗಳು ಗಂಭೀರ ಚಿಂತೆಗೆ ಕಾರಣವಾಗಿವೆ. ರಾಜ್ಯಾದ್ಯಂತ ಕಳೆದ ವರ್ಷ ಒಟ್ಟು 43,130 ರಸ್ತೆ ಅಪಘಾತಗಳು ಸಂಭವಿಸಿದ್ದು, ಇದರಲ್ಲಿ 10,410 ಪ್ರಾಣಾಪಾಯಕರ ಅಪಘಾತಗಳು ಹಾಗೂ 32,720 ಅಪಾಯಕಾರಿಯಲ್ಲದ ಅಪಘಾತಗಳು ಸೇರಿವೆ. ಈ ಅಪಘಾತಗಳಲ್ಲಿ 10,626 ಮಂದಿ ಮೃತಪಟ್ಟಿದ್ದು, 57,017 ಮಂದಿ ಗಾಯಗೊಂಡಿದ್ದಾರೆ. ಒಟ್ಟಾರೆ ಮೃತಪಟ್ಟವರು ಹಾಗೂ ಗಾಯಗೊಂಡವರ ಸಂಖ್ಯೆ 67,626ಕ್ಕೆ ತಲುಪಿದೆ.

ಮಂಗಳೂರು ನಗರದಲ್ಲಿ ಮೂರು ವರ್ಷಗಳ ಅಪಘಾತ ಸ್ಥಿತಿ
ಮಂಗಳೂರು ನಗರದಲ್ಲಿ 2023ರಿಂದ 2025ರವರೆಗೆ ಸಂಭವಿಸಿದ ರಸ್ತೆ ಅಪಘಾತಗಳ ಅಂಕಿ-ಅಂಶಗಳು ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರು ಹೆಚ್ಚು ಅಪಾಯದಲ್ಲಿರುವುದನ್ನು ತೋರಿಸುತ್ತಿವೆ.
2023ನೇ ವರ್ಷ:
• ಒಟ್ಟು ಅಪಘಾತಗಳು: 1,013
• ಮೃತಪಟ್ಟವರು: 167
• ಗಾಯಗೊಂಡವರು: 1,155
• ಪಾದಚಾರಿಗಳು: ಮೃತಪಟ್ಟವರು 58 (38%), ಗಾಯಗೊಂಡವರು 271 (23%)
• ದ್ವಿಚಕ್ರ ವಾಹನಗಳು: ಮೃತಪಟ್ಟವರು 84 (50%), ಗಾಯಗೊಂಡವರು 597 (52%)
2024ನೇ ವರ್ಷ:
• ಒಟ್ಟು ಅಪಘಾತಗಳು: 1,026
• ಮೃತಪಟ್ಟವರು: 178
• ಗಾಯಗೊಂಡವರು: 1,167
• ಪಾದಚಾರಿಗಳು: ಮೃತಪಟ್ಟವರು 66 (37%), ಗಾಯಗೊಂಡವರು 274 (23%)
• ದ್ವಿಚಕ್ರ ವಾಹನಗಳು: ಮೃತಪಟ್ಟವರು 94 (53%), ಗಾಯಗೊಂಡವರು 621 (53%)
2025ನೇ ವರ್ಷ:
• ಒಟ್ಟು ಅಪಘಾತಗಳು: 1,014
• ಮೃತಪಟ್ಟವರು: 171
• ಗಾಯಗೊಂಡವರು: 1,213
• ಪಾದಚಾರಿಗಳು: ಮೃತಪಟ್ಟವರು 67 (39%), ಗಾಯಗೊಂಡವರು 249 (21%)
• ದ್ವಿಚಕ್ರ ವಾಹನಗಳು: ಮೃತಪಟ್ಟವರು 82 (48%), ಗಾಯಗೊಂಡವರು 627 (52%)

ವಾಹನ ನಿಯಮ ಉಲ್ಲಂಘನೆ: ದಂಡದ ಮೊತ್ತ ಏರಿಕೆ
ವಾಹನ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ದಂಡದ ಮೂಲಕ ದಾಖಲಾದ ಪ್ರಕರಣಗಳ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ.
• 2023: ಒಟ್ಟು ಪ್ರಕರಣಗಳು 1,36,493, ದಂಡದ ಮೊತ್ತ ₹5,41,88,300
• 2024: ಒಟ್ಟು ಪ್ರಕರಣಗಳು 1,44,859, ದಂಡದ ಮೊತ್ತ ₹6,65,76,800
• 2025: ಒಟ್ಟು ಪ್ರಕರಣಗಳು 2,43,548, ದಂಡದ ಮೊತ್ತ ₹9,49,07,450

ಫಲಾಪೇಕ್ಷೆಯಿಲ್ಲದೆ ಟ್ರಾಫಿಕ್ ವಾರ್ಡನ್‌ಗಳಾಗಿ ಸೇವೆ ಸಲ್ಲಿಸುತ್ತಿರುವ ಫ್ರಾನ್ಸಿಸ್ ಮ್ಯಾಕ್ಸಿಂ ಮೊರಾಸ್, ಹಸನ್, ವಾಯ್ಲೆಟ್ ಪಿರೇರಾ, ರೋಶನ್ ರಾಯ್ ಸಿಕ್ವೇರಾ, ಬೂಬಣ್ಣ, ರಮೇಶ್ ಕಾವೂರು, ಬಶೀರ್ ಹಳೆಯಂಗಡಿ ಅವರನ್ನು ಗೌರವಿಸಲಾಯಿತು. ಕರ್ತವ್ಯದ ವೇಳೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ತನ್ನ ಸ್ಕೂಟಿಯಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಂಚಾರಿ ಪೊಲೀಸ್ ಸಿಬ್ಬಂದಿ ಮನ್ಸಿಜಾ ಬಾನು ಅವರನ್ನು ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಡಿಸಿಪಿಗಳಾದ ಮಿಥುನ್ ಕುಮಾರ್, ಪಿ. ಉಮೇಶ್, ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ಎಸಿಪಿಗಳಾದ ಗೀತಾ ಕುಲಕರ್ಣಿ, ವಿಜಯ ಕಾಂತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಎಸಿಪಿ ನಜ್ಮಾ ಫಾರೂಕಿ ಸ್ವಾಗತಿಸಿದರು. ಆರ್‌ಜೆ ಅನುರಾಗ್ ಕಾರ್ಯಕ್ರಮ ನಿರೂಪಿಸಿದರು.


Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version