ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷರಾಗಿ ರಮೀಝ್ ಹುಸೈನ್ ನೇಮಕ

Spread the love

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷರಾಗಿ ರಮೀಝ್ ಹುಸೈನ್ ನೇಮಕ

ಉಡುಪಿ:  ಜಿಲ್ಲೆಯ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರಮೀಝ್ ಹುಸೈನ್ ಅವರನ್ನು ನೇಮಕ ಮಾಡಲಾಗಿದೆ.

ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಮಾಜಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ರಮೀಝ್ ಹುಸೈನ್ ಅವರು ಕಾಪು ತಾಲೂಕು ಭೂನ್ಯಾಯ ಮಂಡಳಿ ಸದಸ್ಯರೂ ಆಗಿದ್ದಾರೆ. ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ಶಿಫಾರಸ್ಸಿನ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈ. ಸುಕುಮಾರ್ ಅವರು ಅವರನ್ನು ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ರಮೀಝ್ ಹುಸೈನ್ ಅವರು ಈ ಮೊದಲು ಎನ್ ಎಸ್ ಯು ಐ ಜಿಲ್ಲಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಹಾಗೂ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾಪು ಕ್ಷೇತ್ರದಲ್ಲಿ ಉತ್ತಮ ಪಕ್ಷ ಸಂಘಟನೆ ನಡೆಸಿದ ಅನುಭವ ಹೊಂದಿದ್ದಾರೆ. ವಿವಿಧ ರಾಜ್ಯಗಳಲ್ಲಿ ಚುನಾವಣಾ ವೀಕ್ಷಕರಾಗಿ ಅನುಭವ ಹೊಂದಿದ್ದಾರೆ. ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿರುವ ಅವರು ಯುವಕರ ನೆಚ್ಚಿನ ನಾಯಕರಾಗಿ ಗುರುತಿಸಿಕೊಂಡಿದ್ದಾರೆ


Spread the love
Subscribe
Notify of

0 Comments
Inline Feedbacks
View all comments