ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲದ ಪ್ರಯೋಜನ ಪಡೆದುಕೊಳ್ಳಿ : ಪ್ರಶಾಂತ್ ಜತ್ನನ್ನ
ಉಡುಪಿ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನ ಮಾಡುತ್ತಿರುವ ಅರಿವು ವಿದ್ಯಾಭ್ಯಾಸ ಸಾಲಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ‘ ಆಹ್ವಾನಿಸಿದ್ದು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವಂತೆ ನಿಗಮದ ನಿರ್ದೇಶಕರಾದ ಪ್ರಶಾಂತ್ ಜತ್ತನ್ನ ಮನವಿ ಮಾಡಿದ್ದಾರೆ
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ 2026-27ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಅನುಮೋದಿತ ಕಾರ್ಯಕ್ರಮವಾದ ಅರಿವು ವಿಧ್ಯಾಭ್ಯಾಸ ಸಾಲ ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ ಅಥವಾ ನೀಟ್ ಅಥವಾ ಜೆಇಇ ಮೂಲಕ ಆಯ್ಕೆಯಾದ MBBS, MD/MS ಕೋರ್ಸ್ಗಳಿಗೆ ಸರ್ಕಾರಿ ಕಾಲೇಜು/ಖಾಸಗಿ/ಮ್ಯಾನೇಜ್ಮೆಂಟ್ ಕೋಟಾದಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 5.00 ಲಕ್ಷದವರೆಗೆ ಸಾಲ ನೀಡುತ್ತಿದ್ದು, ವೃತ್ತಿಪರ F (MBBS, MD, BDS, MDS, B. Ayush, M. Ayush, BE, B. Tech, M. Tech, ME, B. Arch, M. Arch, MBA, MCA, LLB, BSc in Horticulture, Agriculture, Agriculture Engineering, Dairy Technology, Forestry, Veterinary and Animal Sciences, Food Technology, Biotechnology, Fisheries, Sericulture, Home/Community Sciences, Food Nutrition & Dietetics, B. Pharma, M. Pharma, Pharma, D, D. Pharma) ಈ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅನ್ಲೈನ್ ಮೂಲಕ ಅರಿವು ವಿಧ್ಯಾಭ್ಯಾಸ ಸಾಲಕ್ಕೆ ಅರ್ಜಿಗಳನ್ನು ಆಹ್ವಾನಿಸಿದ್ದು, ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವಂತೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ
