ಸಿಗದ ಬೆಂಗಳೂರು ಅಭಿವೃದ್ಧಿ ಖಾತೆ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ
ಬೆಂಗಳೂರು: ಡಿಕೆ ಶಿವಕುಮಾರ್ ಸಂಪುಟದ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ಶುಕ್ರವಾರ ಬೆಳಗ್ಗೆ ರಾಜೀನಾಮೆ ನೀಡಿದರು.
ಬೆಂಗಳೂರು ಅಭಿವೃದ್ಧಿ ಖಾತೆಗೆ ಪಟ್ಟು ಹಿಡಿದಿದ್ದ ಅವರಿಗೆ ಜಲಸಂಪನ್ಮೂಲ ಇಲಾಖೆಯ ಹೊಣೆ ವಹಿಸಲಾಗಿತ್ತು. ಕೊನೇ ಕ್ಷಣದ ವರೆಗೂ ಖಾತೆಗೆ ಪಟ್ಟು ಹಿಡಿದಿದ್ದರೂ ಪ್ರಯೋಜನವಾಗಿರಲಿಲ್ಲ. ಇದರಿಂದ ತೀವ್ರ ಅಸಮಾಧಾನಗೊಂಡ ಅವರು ಸಂಪುಟದಿಂದ ಹೊರಬರುವ ನಿರ್ಧಾರ ಪ್ರಕಟಿಸಿದ್ದಾರೆ.
