ಅ. 10, 11 : ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ

Spread the love

ಅ. 10, 11 : ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಕ್ಟೋಬರ್ 10 ಮತ್ತು 11 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅ. 10 ರಂದು ಬೆಳಿಗ್ಗೆ 10:05- ಮಂಗಳೂರು ವಿಮಾನ ನಿಲ್ದಾಣ ಆಗಮನ, 10:30 – ಫಳ್ನೀರ್ ಶ್ರವಣ ಹಿಯರಿಂಗ್ ಏಡ್ ಸೆಂಟರ್ ಉದ್ಘಾಟನೆ, 10:45- ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪ್ರಗತಿ ಪರಿಶೀಲನೆ ಸಭೆ, 11:45- ಮಂಗಳೂರು ಮಹಾನಗರಪಾಲಿಕೆ ಸಭಾಂಗಣದಲ್ಲಿ ಮಹಾನಗರಪಾಲಿಕೆಯ ಪ್ರಗತಿ ಪರಿಶೀಲನಾ ಸಭೆ, ಮದ್ಯಾಹ್ನ 2- ಕೆನರಾ ವಾಣಿಜ್ಯ ಚೇಂಬರ್ನಲ್ಲಿ ಸಂವಾದ, 3- ಅಡ್ಯಾರ್ ಗಾರ್ಡನ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ, ಸಂಜೆ 5- ವಾರ್ತಾಭಾರತಿ ದಿನ ಪತ್ರಿಕೆ ಕೇಂದ್ರ ಕಚೇರಿಗೆ ಭೇಟಿ, 6- ಮಂಗಳೂರು ಸೂರ್ಯವುಡ್ ಸಭಾಂಗಣದಲ್ಲಿ ಪ್ರೊಫೆಷನಲ್ ಸ್ಟೂಡೆಂಟ್ ಗ್ಲೋಬಲ್ ಕಾನ್ಫರೆನ್ಸ್ ಕಾರ್ಯಕ್ರಮ.

ಅಕ್ಟೋಬರ್ 11 ರಂದು ಬೆಳಿಗ್ಗೆ 9- ಬೋಳೂರು ಅಮೃತಾನಂದಮಯಿ ಮಠದಲ್ಲಿ ಅಮೃತೋತ್ಸವ ಕಾರ್ಯಕ್ರಮ, 10:30- ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಉದ್ಘಾಟನೆ, 11- ಬೆಳ್ತಂಗಡಿ ಮಾಲಾಡಿ ಗ್ರಾಮದ ಸಬರಂಬೈಲು ಎಂಬಲ್ಲಿ ನೂತನ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ, 11:30 – ಬೆಳ್ತಂಗಡಿ ಲಾಯಿಲ ಕಾಶಿಬೆಟ್ಟು ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಶಿಲಾನ್ಯಾಸ, 12- ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮ, ಬೆಳ್ತಂಗಡಿ ಟೌನ್ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡ ಶಿಲಾನ್ಯಾಸ, 94 ಸಿ ಹಕ್ಕು ಪತ್ರ ವಿತರಣೆ, ಮಧ್ಯಾಹ್ನ 1 – ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ, ಸಂಜೆ 4 ಗಂಟೆಗೆ ಸಚಿವರು ಬೆಳ್ತಂಗಡಿಯಿಂದ ನಿರ್ಗಮಿಸಿ, ಮಂಗಳೂರು ವಿಮಾನ ನಿಲ್ದಾಣದಿಂದ 6:15 ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments