ನ 19-21 : ಉಡುಪಿ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವೆ ಜಯಮಾಲ ಪ್ರವಾಸ

Spread the love

ನ 19-21 : ಉಡುಪಿ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವೆ ಜಯಮಾಲ ಪ್ರವಾಸ

ಉಡುಪಿ : ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ನವೆಂಬರ್ 19, 20 ಮತ್ತು 21 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನವೆಂಬರ್ 19 ರಂದು ರಾತ್ರಿ 10.50 ಕ್ಕೆ ಉಡುಪಿಗೆ ಆಗಮಿಸಿ, ಸಕ್ರ್ಯೂಟ್ ಹೌಸ್, ಉಡುಪಿಯಲ್ಲಿ ವಾಸ್ತವ್ಯ ಮಾಡುವರು.

ನವೆಂಬರ್ 20 ರಂದು ಬೆಳಗ್ಗೆ 10 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ, ಉಡುಪಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ, ಉಡುಪಿಯಲ್ಲಿ ವಾಸ್ತವ್ಯ ಮಾಡುವರು.

ನವೆಂಬರ್ 21 ರಂದು ಬೆಳಗ್ಗೆ 10 ಕ್ಕೆ ಉಡುಪಿ ಜಿಲ್ಲಾಸ್ಪತ್ರೆ ಪಕ್ಕದ ಜಿಲ್ಲಾ ಆಯುಷ್ ಆಸ್ಪತ್ರೆಯ ಉದ್ಘಾಟನೆಯಲ್ಲಿ ಭಾಗವಹಿಸಿವರು. 10.30 ಕ್ಕೆ ಜಿಲ್ಲಾಸ್ಪತ್ರೆ ಉಡುಪಿಯಲ್ಲಿ ಸಿಟಿಸ್ಕ್ಯಾನ್ ಉದ್ಘಾಟನೆ, ಶವಾಗಾರ ಲೋಕಾರ್ಪಣೆ ಮತ್ತು ಕಣ್ಣಿನ ಶಸ್ತ್ರ ಚಿಕಿತ್ಸಾ ಕೊಠಡಿಯ ಶಂಕುಸ್ಥಾಪನೆಯಲ್ಲಿ ಭಾಗವಹಿಸಿ, 11.30 ಕ್ಕೆ ಕುಂದಾಪುರ ಶಾಸ್ತ್ರೀ ಸರ್ಕಲ್ನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ, ಮಧ್ಯಾಹ್ನ 12 ಕ್ಕೆ ಕುಂದಾಪುರದ ಜೂನಿಯರ್ ಕಾಲೇಜಿನ ಲಕ್ಷ್ಮೀ ನಾರಾಯಣ ಕಲಾಮಂದಿರದಲ್ಲಿ ಕುಂದಾಪುರ ಕ್ಷೇತ್ರದ ಫಲಾನುಭವಿಗಳಿಗೆ ಸವಲತ್ತು ವಿತರಣೆ, 3 ಕ್ಕೆ ಕಾರ್ಕಳದ ಬಂಡೀಮಠದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 3.30 ಕ್ಕೆ ಕಾರ್ಕಳ ತಾಲೂಕು ಪಂಚಾಯತ್ ಸಭಾಭವನದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಫಲಾನುಭವಿಗಳಿಗೆ ಸವಲತ್ತು ವಿತರಣೆ, ಸಂಜೆ 4.30 ಕ್ಕೆ ಕಾರ್ಕಳದ ಕುಕ್ಕಂದೂರಿನಲ್ಲಿ ಎ.ಎನ್.ಎಂ. ಉಪಕೇಂದ್ರದ ಉದ್ಘಾಟನೆಯಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳುವರು.


Spread the love