ನೌಷದ್ ಕೊಲೆ ಯತ್ನ ಆರೋಪಿಯ ಬಂಧನ
ಮಂಗಳೂರು: ನೌಷದ್ ಎಂಬವರ ಕೊಲೆಗೆ ಯತ್ನಿಸಿದ ಆರೋಪಿಯನ್ನು ರೌಡಿ ನಿಗ್ರಹದಳದ ಪೋಲಿಸರು ಬಂಧಿಸಿದ್ದಾರೆ.

ಬಂಧಿತನನ್ನು ಉಳ್ಳಾಲ ಮೊಗವೀರಪಟ್ಣ ನಿವಾಸಿ ರಜನೀಶ್ (32) ಎಂದು ಗುರುತಿಸಲಾಗಿದೆ.
2017 ರಮಾರ್ಚ್ 26 ರಂದು ರಾತ್ರಿ 10-00 ಗಂಟೆಗೆ ತನ್ನ ಬೈಕ್ ನಲ್ಲಿ ಕೆಲಸದ ನಿಮಿತ್ತ ಮಂಗಳೂರು ತಾಲೂಕು ಉಳ್ಳಾಲ ಗ್ರಾಮದ ಮುಕ್ಕಚ್ಚೇರಿಯಲ್ಲಿರುವ ಮುನೀರ್ ಎಂಬುವವರು ಸಮೂಸಾ ಫ್ಯಾಕ್ಟರಿಯಲ್ಲಿ ಕೆಲಸ ಮಾಡಲು ಮನೆಯಿಂದ ಹೊರಟು ಉಳ್ಳಾಲ ಪೇಟೆಯಲ್ಲಿರುವ ರೆಹಮಾನಿಯಾ ಮಸೀದಿ ಬಳಿಗೆ ಬರುತಿದ್ದ ನೌಷಾದ್ ಹುಸೈನ್ ಎಂಬವರಿಗೆ ಬೈಕ್ ನಲ್ಲಿ ಬಂದು ತಲವಾರಿನಿಂದ ಹಲ್ಲೆ ನಡೆಸಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ರಜನೀಶ್ ಎಂಬಾತನನ್ನು ಎ.ಸಿ.ಪಿ ರಾಮರಾವ್ ನೇತೃತ್ವದ ರೌಡಿ ನಿಗ್ರಹ ದಳ ಸಿಬ್ಬಂದಿಯವರು ದಸ್ತಗಿರಿ ಮಾಡಿದ್ದು, ಮುಂದಿನ ಕ್ರಮದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.













