ಪೇತ್ರಿ: ಟಿಪ್ಪರ್ – ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ – ಸವಾರ ಮೃತ್ಯು

Spread the love

ಪೇತ್ರಿ: ಟಿಪ್ಪರ್ – ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ – ಸವಾರ ಮೃತ್ಯು

ಬ್ರಹ್ಮಾವರ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒರ್ವ ಯುವಕ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಪೇತ್ರಿ ಜಂಕ್ಷನ್ ಬಳಿ ಸಂಭವಿಸಿದೆ.

ಮೃತ ಯುವಕನನ್ನು ಸಾಸ್ತಾನ, ಐರೋಡಿ ಗೋಳಿಬೆಟ್ಟು ನಿವಾಸಿ ದೀಕ್ಷಿತ್ (24) ಎಂದು ಗುರುತಿಸಲಾಗಿದೆ. ಸಹ ಸವಾರ ಅಭಿಷೇಕ್ ಗಂಭೀರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿಗಳ ಪ್ರಕಾರ ಟಿಪ್ಪರ್ ಬ್ರಹ್ಮಾವರದಿಂದ ಕುಕ್ಕೆಹಳ್ಳಿ ಕಡೆಗೆ ಹೋಗುವ ಸಲುವಾಗಿ ಪೇತ್ರಿ ಜಂಕ್ಷನ್ ನಲ್ಲಿ ಬಲಕ್ಕೆ ತಿರುಗುವ ವೇಳೆ ಹೆಬ್ರಿ ಕಡೆಯಿಂದ ಬ್ರಹ್ಮಾವರಕ್ಕೆ ಹೋಗುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದಿದ್ದು ಇಬ್ಬರೂ ಕೂಡ ರಸ್ತೆಗೆ ಅಪ್ಪಳಿಸಿ ತಲೆಗೆ ಗಂಭೀರ ಗಾಯಗಳಾಗಿದ್ದು ದೀಕ್ಷೀತ್ ಸ್ಥಳದಲ್ಲಿಯೇ ಮೃತಪಟ್ಟಿದ್ದು ಅಭಿಷೇಕ್ ಗಂಭೀರ ಗಾಯಗಳೊಂದಿಗೆ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love