Spread the love
ಫರಂಗಿಪೇಟೆ: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತ್ಯು
ಬಂಟ್ವಾಳ : ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಎಂಬಲ್ಲಿ ಶನಿವಾರ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಬೈಲು ನಿವಾಸಿ ಇಬ್ರಾಹಿಂ ಎನ್ ಎಂದು ಗುರುತಿಸಲಾಗಿದೆ.
ಮಂಗಳೂರು ಕಡೆಯಿಂದ ಬೆಳ್ತಂಗಡಿ ಮನೆಯ ಕಡೆಗೆ ಹೋಗುತ್ತಿದ್ದ ವೇಳೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಮೀನಿನ ಲಾರಿ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Spread the love