ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

Spread the love

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ಉಡುಪಿ : ನಾಟಕಗಳು ಕೇವಲ ಮನೋರಂಜನೆಗೆ ಮಾತ್ರವಲ್ಲ, ಜೀವನ ಸಂಸ್ಕಾರವನ್ನು ಬೆಳೆಸುತ್ತವೆ. ಬದುಕಿನ ಆಚಾರ ವಿಚಾರ ತಿಳಿಸುವ ಕೆಲಸ ರಂಗಭೂಮಿಯಿoದ, ರಂಗಕಲೆಗಳಿoದ ಇನ್ನಷ್ಟು ನಡೆಯಬೇಕು. ಈ ನಿಟ್ಟಿನಲ್ಲಿ ರಂಗಭೂಮಿ ಉಡುಪಿಯ ಕಾರ್ಯ ಮಾದರಿಯಾಗಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದರು.

ಅವರು ಗುರುವಾರ ಎಂಜಿಎo ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಸಹಯೋಗದಲ್ಲಿ ಸಂಸ್ಥೆಯ ಸಂಸ್ಥಾಪಕ ದಿ.ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ಎರಡು ದಿನಗಳ ಕಾಲ ಹಮ್ಮಿಕೊಂಡ ‘ರಂಗಭೂಮಿ ಆನಂದೋತ್ಸವ 2026 ‘ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಂಗಭೂಮಿ ಉಡುಪಿ ಸಂಸ್ಥೆಯನ್ನು ಹುಟ್ಟುಹಾಕಿ, ಅದರ ಅಧ್ಯಕ್ಷನಾಗಿ, ಕಲಾವಿದನಾಗಿ ಬೆಳೆಸಿದ ದಿ. ಕುತ್ಪಾಡಿ ಆನಂದ ಗಾಣಿಗ ಅವರ ಶ್ರಮ ಇಂದು ಫಲ ನೀಡಿದೆ. ಈ ಸಂಸ್ಥೆ ಅನೇಕ ಕಲಾವಿದರು, ಪ್ರತಿಭೆಗಳಿಗೆ ವೇದಿಕೆಯಾಗಿ ನಾಡಿಗೆ ಪರಿಚಯಿಸಿದೆ. ಆನಂದ ಗಾಣಿಗರು ರಂಗಭೂಮಿಗೆ ನೀಡಿದ ಕೊಡುಗೆ ಅಪಾರ. ಸಾಮಾಜಿಕ ಉತ್ತಮ ಸಂದೇಶವನ್ನು ನೀಡುವ ಅರ್ಥಪೂರ್ಣ ನಾಟಕಕ್ಕೆ ಪ್ರೇಕ್ಷಕರ ಪ್ರೋತ್ಸಾಹ ಸದಾ ಇರುತ್ತದೆ. ಸಮಾಜದ ಅಂಕುಡೊoಕನ್ನು ತಿದ್ದುವ ಈ ನಾಟಕೋತ್ಸವಗಳು ಇಂದಿನ ಆಧುನಿಕ ಕಾಲಘಟ್ಟದಲ್ಲಿ ಹೆಚ್ಚಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ರಂಗಭೂಮಿ ಉಡುಪಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ರಂಗಭೂಮಿ ಉಡುಪಿ ತನ್ನ 60 ವರ್ಷಗಳ ಇತಿಹಾಸದಲ್ಲಿ ಅನೇಕ ಕೊಡುಗೆಗಳನ್ನು ಸಮಾಜಕ್ಕೆ ನೀಡಿದೆ. ಈ ಸಂಸ್ಥೆಯನ್ನು ಮುನ್ನಡೆಸಿದ ದಿ. ಆನಂದ ಗಾಣಿಗರ ಶ್ರಮ, ಮಾತು ನಮ್ಮ ಮುಂದಿದೆ. ಮಕ್ಕಳಿಗೆ ರಂಗಶಿಕ್ಷಣ ನೀಡಿ ಭವಿಷ್ಯದ ಕಲಾವಿದರನ್ನು ಹುಟ್ಟುಹಾಕುವ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಸಂಘಸoಸ್ಥೆಗಳು, ರಂಗಾಸಕ್ತ ಮನಸ್ಸುಗಳು ರಂಗಭೂಮಿಯನ್ನು ಉಳಿಸಿ ಬೆಳೆಸಲು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ಬ್ಯಾಂಕಿನ ಪ್ರತಿನಿಧಿ ಸುಬ್ರಹ್ಮಣ್ಯ, ರಂಗಭೂಮಿ ಉಡುಪಿ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ, ಉಪಾಧ್ಯಕ್ಷರಾದ ಭಾಸ್ಕರ ರಾವ್ ಕಿದಿಯೂರು, ಎನ್. ಆರ್. ಬಲ್ಲಾಳ್ ಉಪಸ್ಥಿತರಿದ್ದರು.

ಜಿ.ಪಿ.ಪ್ರಭಾಕರ್ ತುಮರಿ ಕಾರ್ಯಕ್ರಮ ನಿರೂಪಿಸಿದರು. ರಂಗಭೂಮಿಯ ರಂಗಶಿಕ್ಷಣ ನಿರ್ದೇಶಕ ವಿದ್ಯಾವಂತ ಆಚಾರ್ಯ ಸ್ವಾಗತಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಶ್ರೀಪಾದ ಹೆಗಡೆ ನಿರ್ದೇಶನದ ‘ಸಂವೇದನೆ ‘ ನಾಟಕ ಪ್ರದರ್ಶನಗೊಂಡಿತು.


Spread the love
Subscribe
Notify of

0 Comments
Inline Feedbacks
View all comments