ಲೋಕಸಭಾ ಚುನಾವಣೆ- ಶೋಭಾ ಕರಂದ್ಲಾಜೆ ಸಾಂಕೇತಿಕ ನಾಮಪತ್ರ ಸಲ್ಲಿಕೆ

Spread the love

ಲೋಕಸಭಾ ಚುನಾವಣೆ- ಶೋಭಾ ಕರಂದ್ಲಾಜೆ ಸಾಂಕೇತಿಕ ನಾಮಪತ್ರ ಸಲ್ಲಿಕೆ

ಉಡುಪಿ: ಲೋಕಸಭಾ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ, ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು 4 ನೇ ದಿನವಾದ ಶುಕ್ರವಾರ, ಬಿಜೆಪಿಯ ಶೋಭಾ ಕರಂದ್ಲಾಜೆ ಅವರು 2 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಮಾರ್ಚ್ 26 ಕೊನೆಯ ದಿನವಾಗಿದ್ದು, ಮಾರ್ಚ್ 27 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಮಾರ್ಚ್ 29 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.


Spread the love